Good Morning, Happy Monday 2nd October 2023 @ TapOvanam, Hiremath, Tumkur ಸೆಪ್ಟೆಂಬರ್ ಮಾಹೆಯಲ್ಲಿ ಗೌರೀ ಗಣೇಶಜಿ. ಅಕ್ಟೋಬರ್ ಮಾಹೆಯಲ್ಲಿ ಗಾಂಧೀಜಿ, ಶಾಸ್ತ್ರೀಜಿ. ಈ ವರುಷದ ಸೆಪ್ಟೆಂಬರ್ ತಿಂಗಳಿನಲ್ಲಿ ಗೌರೀ ಗಣೇಶ ಹಬ್ಬ ಅಕ್ಟೋಬರ್ ತಿಂಗಳಿನಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ, ಹುಟ್ಟುಹಬ್ಬ. ಗೌರೀ, ಗಣೇಶ ಹಬ್ಬ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ. ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಸಾರ್ವಜನಿಕ ಹಾಗೂ ದೇಶಭಕ್ತಿ ಪ್ರೇರಕ. ಗಣೇಶ ವಿನಾಯಕ, ಗಣನಾಯಕ, ಗಾಂಧೀಜಿ, ಶಾಸ್ತ್ರೀಜಿ ನಾಯಕರು, ರಾಷ್ಟ್ರನಾಯಕರು. ಗಣೇಶ ವಿಘ್ನನಾಶಕ, ವಿಘ್ನವಿನಾಶಕ ಮತ್ತು ಮುಕ್ತಿದಾಯಕ. ಗಾಂಧೀಜಿ, ಶಾಸ್ತ್ರೀಜಿ ದಾಸ್ಯನಾಶಕರು ಮತ್ತು ಸ್ವಾತಂತ್ರ್ಯದಾಯಕರು. ಗೌರೀ, ಗಣೇಶರ ಆಗಮನದಿಂದ ಲೋಕೋದ್ಧಾರ. ಗಾಂಧೀಜಿ, ಶಾಸ್ತ್ರೀಜಿಯವರ ಆಗಮನದಿಂದ ದೇಶೋದ್ಧಾರ. ಗೌರೀ ಗಣೇಶರು ಕೈಲಾಸದಿಂದ ಭೂಮಿಗೆ ಬಂದವರು. ಗಾಂಧೀಜಿ, ಶಾಸ್ತ್ರೀಜಿಗಳು ತ್ಯಾಗ, ಬಲಿದಾನಗಳಿಂದ ಭೂಮಿಯಿಂದ ಕೈಲಾಸದೆತ್ತರಕ್ಕೆ ಬೆಳೆದವರು. ಗೌರೀ ಗಣೇಶ ಭಕ್ತವತ್ಸಲರು. ಗಾಂಧೀಜಿ, ಶಾಸ್ತ್ರೀಜಿ ದೇಶವತ್ಸಲರು. ಗೌರೀ ಗಣೇಶರದು ಅಮ್ಮ, ಮಗನ ಸಂಬಂಧ. ಗಾಂಧೀಜಿ, ಶಾಸ್ತ್ರೀಜಿಗಳದು ತತ್ತ್ವ, ಸಿದ್ಧಾಂತದ ಸಂಬಂಧ. ಗೌರೀ ಗಣೇಶರು ಜನಗಳಿಗೆ ಭಕ್ತಿಯ ಪಾಠಮಾಡುತ್ತಾರೆ. ಗಾಂಧೀಜಿ, ಶಾಸ್ತ್ರೀಜಿ ಜನಗಳಿಗೆ ದೇಶಭಕ್ತಿಯ ಪಾಠಮಾಡುತ್ತಾರೆ. ಗೌರೀ, ಗಣೇಶರ ಹಬ್ಬದಿಂದ ಜನಗಳ ಮೈ, ಮನಸ್ಸುಗಳಲ್ಲಿ ಪುಳಕ ಗಾ...
Popular posts from this blog
21st September 2023
On 21st September 2023 @ TapOvanam, Hiremath, Tumkur >>>>>>>>>>>>>>>>>>>>>>>>>> ಶ್ರೀ ಶಿವಾನಂದ ಮರಿಗುದ್ದಿಯವರ ನಿಧನಕ್ಕೆ ತುಮಕೂರು ಹಿರೇಮಠದ ಶ್ರೀ ಶ್ರೀಗಳವರ ಭಾವಪೂರ್ಣ ಶ್ರದ್ಧಾಂಜಲಿ >>>>>>>>>>>>>>>>>>>>>>>>>> “ದೇವರಾಗಿದ್ದರೆ ನಾವು ಎಲ್ಲವನ್ನೂ ಸರಿ ಮಾಡುತ್ತೇವೆ” ಎಂದು ನಾವುಗಳು ಅಂದುಕೊಳ್ಳುತ್ತೇವೆ. ಆದರೆ ಆ ದೇವರಾದವನು ಕೂಡ ಎಲ್ಲವನ್ನೂ ಸರಿಮಾಡುವುದಿಲ್ಲ ಮತ್ತು ಆತ ಮಾಡುವುದೆಲ್ಲವೂ ಸರಿ ಇರುವುದಿಲ್ಲ ಎಂಬ ವಿಚಾರವಿದು ಎಲ್ಲರಿಗೂ ಗೊತ್ತಿರುವ ವಿಷಯ. ದೇವರು ಒಮ್ಮೊಮ್ಮೆ ತುಂಬ ನಿರ್ದಯವಾಗಿ ನಡೆದುಕೊಳ್ಳುತ್ತಾನೆ. ಆತ ತುಂಬ ಅನ್ಯಾಯ ಮಾಡುತ್ತಾನೆ. ಆತ ತನಗಿರುವ ಕರ್ತುಂ, ಅಕರ್ತುಂ ಮತ್ತು ಅನ್ಯಥಾ ಕರ್ತುಂ ಶಕ್ತಿ, ಸಾಮರ್ಥ್ಯದ ದುರುಪಯೋಗಮಾಡಿಕೊಳ್ಳುತ್ತಾನೆ. ದೇವರಾದ ಮಾತ್ರಕ್ಕೆ ಏನೆಲ್ಲ ಮಾಡಿದರೂ ನಡೆಯುತ್ತದೆ ಎಂದು ತಿಳಿದುಕೊಂಡಿದ್ದರೆ ಅದು ಖಂಡಿತ ತಪ್ಪು. ದೇವರು ತನಗೆ ತಿಳಿದ ಹಾಗೆಲ್ಲ ಮಾಡುವುದಕ್ಕೆ ದೇವರಾಗಿಲ್ಲವೆಂದು ತಿಳಿದುಕೊಂಡರೆ ಸರಿ...
Comments
Post a Comment